ಬಿಸಿಯೂಟ ಆಹಾರ ಸಾಮಗ್ರಿ ಅಕ್ರಮ ಸಾಗಣೆ: ಮುಖ್ಯ ಶಿಕ್ಷಕ ಅಮಾನತು

ಶಾಲೆಯ ಬಿಸಿಯೂಟ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕೆ. ನಂದೀಶ್ ಎಂಬುವವರನ್ನು ಅಮಾನತು ಮಾಡಿ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಚಂದ್ರಪಾಟೀಲ್ ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಾಮರಾಜನಗರ: ಶಾಲೆಯ ಬಿಸಿಯೂಟ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕೆ. ನಂದೀಶ್ ಎಂಬುವವರನ್ನು ಅಮಾನತು ಮಾಡಿ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಚಂದ್ರಪಾಟೀಲ್ ಆದೇಶ ಹೊರಡಿಸಿದ್ದಾರೆ.

ಶಾಲೆಯ ಬಿಸಿಯೂಟದ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಶಾಲೆಯಿಂದ ಹೊರ ಸಾಗಿಸುತ್ತಿದ್ದ ಬಗ್ಗೆ ಕೆಲ ಮಾಧ್ಯಮ ಹಾಗೂ ವ್ಯಾಟ್ಸ್ಯಾಪ್ ವಿಡಿಯೋ ದೃಶ್ಯಾವಳಿ ನೀಡಿದ ದೂರನ್ನು ಆಧರಿಸಿ ವಿಚಾರಣೆ ನಡೆಸಲಾಗಿದೆ. ಮೇಲ್ನೋಟಕ್ಕೆ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾದ ಕೆ. ನಂದೀಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಚಂದ್ರಪಾಟೀಲ್ ಅವರು ತಿಳಿಸಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com