ವಿಜಯಪುರ: ಬೆಂಕಿಪೊಟ್ಟಣ ಸಾಗುತ್ತಿದ್ದ ಲಾರಿ ಸುಟ್ಟು ಭಸ್ಮ, ಆಶ್ಚರ್ಯಕರ ರೀತಿಯಲ್ಲಿ ಡೈವರ್-ಕ್ಲೀನರ್ ಬಚಾವ್!

ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.
ಲಾರಿ ಬೆಂಕಿಗಾಹುತಿ
ಲಾರಿ ಬೆಂಕಿಗಾಹುತಿ

ವಿಜಯಪುರ: ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.

ತಮಿಳುನಾಡಿನಿಂದ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಲಾರಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುತ್ತಿದ್ದಾಗ ದಿಢೀರ್ ಬೆಂಕಿ ಹತ್ತಿಕೊಂಡು ಭಸ್ಮವಾಗಿದೆ. ಆದರೆ, ರಾಷ್ಟ್ರೀಯ ಹೆದ್ದಾರಿ 13 ರ ಅನಿಕೇರಿ ತಾಂಡಾ ಬಳಿ ನಡೆದ ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಆಶ್ಚರ್ಯಕರವಾಗಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ನಿ ಶಾಮಕ ಪಡೆಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಘಟನೆ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ತೀವ್ರ ಅಸ್ತವ್ಯಸ್ತಗೊಂಡಿದೆ. ವಿಜಯಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com