ಹೊಸಪೇಟೆ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ಮತ್ತು ಎನ್ಆರ್'ಸಿ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ಅವರನ್ನು ಬಿಡುಗಡೆ ಮಾಡಿದರೆ ನಾವು ಎನ್ಕೌಂಟರ್ ಮಾಡುತ್ತೇವೆ, ಅಷ್ಟೇ ಅಲ್ಲ ಅವರನ್ನು ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಬಹುಮಾನ ಕೊಡುತ್ತೇವೆಂದು ಶ್ರೀರಾಮಸೇನೆ ಮುಖಂಡ ಸಂಜೀವ ಮರಡಿ ವಿವಾದಾತ್ಮಕ ಘೋಷಣೆ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಶ್ರೀರಾಮಸೇನೆ ಸಂಘಟನೆಯ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅಮೂಲ್ಯಳನ್ನು ಜೈಲಿನಿಂದ ಬಿಡುಗಡೆ ಮಾಡಬಾರದು. ಹಾಗೆ ಮಾಡಿದ್ದೇ ಆದರೆ, ಆಕೆಯನ್ನು ಎನ್ಕೌಂಟರ್ ಮಾಡಿ ಕೊಲ್ಲುತ್ತೇವೆ. ಅಲ್ಲದೆ. ಆಕೆಯನ್ನು ಯಾರೇ ಕೊಂದರೂ ಅವರಿಗೆ ರೂ.10 ಲಕ್ಷ ಬಹುಮಾನ ನೀಡುತ್ತೇವೆಂದು ಹೇಳಿದ್ದಾರೆ.
ಮರಡಿಯವರು ನೀಡಿರುವ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿವೆ.
Advertisement