ಪ್ರತಿಯೊಬ್ಬ ಶಾಸಕರಿಗೂ ಸಂವಿಧಾನದ ಕನ್ನಡ ಪ್ರತಿ ನೀಡುತ್ತೇವೆ: ಯಡಿಯೂರಪ್ಪ

ಈ ಬಾರಿಯ ಬಜೆಟ್ ವೇಳೆ ಸಂವಿಧಾನವನ್ನು ಅನುವಾದಿಸಿ ಕನ್ನಡಕ್ಕೆ ಮುದ್ರಿಸಿ ಎಲ್ಲ ಶಾಸಕರಿಗೂ ಓದಿ ಮಾತನಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಕೊಪ್ಪಳ: ಈ ಬಾರಿಯ ಬಜೆಟ್ ವೇಳೆ ಸಂವಿಧಾನವನ್ನು ಅನುವಾದಿಸಿ ಕನ್ನಡಕ್ಕೆ ಮುದ್ರಿಸಿ ಎಲ್ಲ ಶಾಸಕರಿಗೂ ಓದಿ ಮಾತನಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಎಲ್ಲ ಸಿದ್ದತೆ ನಡೆದಿದೆ. ಈ ಬಾರಿಯ ಬಜೆಟ್ ಅಧಿವೇಶನ ಐತಿಹಾಸಿಕವಾಗಲಿದೆ. 

ಯಾಕೆಂದರೇ ಬಜೆಟ್ ಅಧಿವೇಶನದಲ್ಲಿ ಎಲ್ಲ ಶಾಸಕರು ಸಂವಿಧಾನದ ಬಗ್ಗೆ ಮಾತನಾಡಲಿದ್ದಾರೆ. ಅದಕ್ಕಾಗಿ ಸಂವಿಧಾನವನ್ನು ಕನ್ನಡಕ್ಕೆ ಅನುವಾದಿಸಿ ಮುದ್ರಿಸಿ ಎಲ್ಲರಿಗೂ ಪುಸ್ತಕ ನೀಡುತ್ತೇವೆ ಎಂದರು.

ಬಜೆಟ್​ ಮುನ್ನ ಅಂದರೆ ಮಾರ್ಚ್​ 3 ಮತ್ತು 4ರಂದು ಎಲ್ಲ ಶಾಸಕರು ಸಂವಿಧಾನದ ಕುರಿತು ಭಾಷಣ ಮಾಡಲಿದ್ದಾರೆ ಎಂದರು. ಶಾಸಕರಿಗೆ  ಸಂವಿಧಾನದ ಪುಸ್ತಕ ಓದಿಕೊಂಡು ಬಂದು ಮಾತನಾಡಲು ಅವಕಾಶ ಕಲ್ಪಿಸಲಾಗುತ್ತದೆ. ಇದೊಂದು ಐತಿಹಾಸಿಕ ನಿರ್ಧಾರ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com