ಚಿಕ್ಕೋಡಿ: ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಸವಾರ ದುರ್ಮರಣ

ಬೈಕ್ ಸವಾರನಿಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಬಳಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕೋಡಿ: ಬೈಕ್ ಸವಾರನಿಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಬಳಿ ನಡೆದಿದೆ.

ಶ್ರೀಕಾಂತ್ ಮುಚಂಡಿ (65) ಚಿಕಿತ್ಸೆ ಫಲಿಸದೆ ಸಾವನಪ್ಪಿರುವ ವ್ಯಕ್ತಿ. ಅಥಣಿಯಿಂದ ಬೆಳಗಾವಿಗೆ ಹೊರಟಿದ್ದ ಪೊಲೀಸ್ ಜೀಪ್, ಅಥಣಿ ಡಿವೈಎಸ್ಪಿ ಎಸ್ ವಿ ಗಿರೀಶ ಎಂಬುವರ ಸರಕಾರಿ ಜೀಪ್. ಚಾಲಕ ಎಸ್ ಬಿ ದೊಡ್ಡಮನಿ ಅವರಿಂದ ಗಾಯಾಳುವನ್ನ ಚಿಕ್ಕೋಡಿ ಆಸ್ಪತ್ರೆಗೆ ರವಾನೆ ಮಾಡಿದರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. 

ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com