ಮೈಸೂರು: ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ
ಬಂಧಿತರನ್ನು ಬಾಂಗ್ಲಾ ದೇಶದ ಸಾತ್ಕೀರಾದ ಮೊಹಮದ್ ಅಬ್ದುಲ್ಲಾ ಹಾಗೂ ಮೊಹಮದ್ ಹಬೀಬುಲ್ಲಾ ಎಂದು ಗುರುತಿಸಲಾಗಿದೆ.
ಇಬ್ಬರೂ ನಂಜನಗೂಡಿನ ಹಿಮ್ಮಾವು ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಖಚಿತ ಸುಳಿವಿನ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ವೇಳೆ ಬಾಂಗ್ಲಾದೇಶದಿಂದ ವಲಸೆ ಬಂದಿರುವ ಅಂಶವನ್ನು ಬಾಯಿಬಿಟ್ಟಿದ್ದಾರೆ.
ಕೆಲ ಕಾಲ ಬೆಂಗಳೂರು ನಗರದಲ್ಲಿ ವಾಸವಾಗಿದ್ದ ಬಂಧಿತರು ವರ್ಷದ ಹಿಂದೆ ನಂಜನಗೂಡಿಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.
Advertisement