ಪೌರತ್ವ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ಯಡಿಯೂರಪ್ಪ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಆಂದೋಲನದ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದ ವಸಂತನಗರದಲ್ಲಿ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಾಯ್ದೆಯಿಂದ ದೇಶದಲ್ಲಿನ 130 ಕೋಟಿ ಜನರಲ್ಲಿ ಯಾರೊಬ್ಬರಿಗೂ ತೊಂದರೆಯಾಗುವುದಿಲ್ಲ. ಆದ್ದರಿಂದ ತಪ್ಪು ಮಾಹಿತಿಗಳಿಗೆ ಕಿವಿಗೊಡಬಾರದು. ಈ ಹಿಂದೆ ಅಧಿಕಾರದಲ್ಲಿದ್ದ ಹಿಂದೆ ಪ್ರಧಾನಿಗಳಾಗಿದ್ದ ಜವಾಹರ್ ಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್‍ಗಾಂಧಿ ಈ ಕಾಯ್ದೆ ಜಾರಿಗೆ ತಂದಿದ್ದರು. ಆಗ ಯಾವ ವಿರೋಧವೂ ಇರಲಿಲ್ಲ. ಸಹಮತ ಇತ್ತು. 

ನರೇಂದ್ರಮೋದಿಯವರ ಸರ್ಕಾರ ತಿದ್ದುಪಡಿ ತಂದಾಗ ಮಾತ್ರ ವಿರೋಧಿಸಲಾಗುತ್ತಿದೆ. ದುರುದ್ದೇಶದಿಂದ ಅಲ್ಪಸಂಖ್ಯಾತರಲ್ಲಿ ಗೊಂದಲ ಮೂಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಸ್ತವ ಸಂಗತಿಗಳನ್ನು ಜನರಿಗೆ ತಲುಪಿಸಲು ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಅಭಿಯಾನವನ್ನು ಇಂದಿನಿಂದ ಆರಂಭಿಸಲಾಗಿದೆ. ರಾಜ್ಯದಲ್ಲಿ 30 ಲಕ್ಷ ಮನೆಗಳು ಸೇರಿದಂತೆ ದೇಶದಲ್ಲಿ 3 ಕೋಟಿ ಮನೆಗಳಿಗೆ ತಲುಪಿ ವಾಸ್ತವಿಕ ಸಂಗತಿಗಳನ್ನು ತಿಳಿಸಲಾಗುವುದು ಎಂದು ಹೇಳಿದರು.

ಅಭಿಯಾನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಅಭಿಯಾನದ ಸಂಚಾಲಕ ಎನ್.ರವಿಕುಮಾರ್, ಸಂಸದ ಪಿ.ಸಿ.ಮೋಹನ್ ಮತ್ತು ಪಕ್ಷದ ಇತರ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com