ಬೆಂಗಳೂರು: ಜೀವ ಉಳಿಸಬೇಕಿದ್ದ ಆ್ಯಂಬುಲೆನ್ಸ್ ಓನ್ ವೇಯಲ್ಲಿ ಬಂದು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ!

ಆ್ಯಂಬುಲೆನ್ಸ್ ಒಂದು ಓನ್ ವೇಯಲ್ಲಿ ವೇಗವಾಗಿ ಬರುತ್ತಿದ್ದಾಗ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆ್ಯಂಬುಲೆನ್ಸ್ ಒಂದು ಓನ್ ವೇಯಲ್ಲಿ ವೇಗವಾಗಿ ಬರುತ್ತಿದ್ದಾಗ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆಯ ಶ್ರೀನಿವಾಗಿಲು ಜಂಕ್ಷನ್ ಬಳಿ ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರಾದ 30 ವರ್ಷದ ಇಬ್ರಾಹಿಂ ಖಲೀಲ್ ಮತ್ತು 28 ವರ್ಷದ ಮನ್ಸೂರ್ ಎಂಬುವರು ಮೃತಪಟ್ಟಿದ್ದಾರೆ.

ಇಬ್ರಾಹಿಂ ಮತ್ತು ಮನ್ಸೂರ್ ಇಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿ ನಾಗವಾರ ಕಡೆಗೆ ಹೊರಟ್ಟಿದ್ದರು. ಈ ವೇಳೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಇಬ್ಬರು ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com