ನಿವೃತ್ತ ಪ್ರಾಚಾರ್ಯರಿಗೆ ಬಿತ್ತು ಧರ್ಮದೇಟು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿವೃತ್ತ ಪ್ರಾಚಾರ್ಯರೊಬ್ಬರಿಗೆ ನಡು ರಸ್ತೆಯಲ್ಲೇ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದ ಘಟನೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸಾರ್ವಜನಿಕರು ನಿವೃತ್ತ ಪ್ರಾಚಾರ್ಯರನ್ನು ಚಪ್ಪಲಿಯಲ್ಲಿ ಹೊಡೆಯುತ್ತಿರುವುದು
ಸಾರ್ವಜನಿಕರು ನಿವೃತ್ತ ಪ್ರಾಚಾರ್ಯರನ್ನು ಚಪ್ಪಲಿಯಲ್ಲಿ ಹೊಡೆಯುತ್ತಿರುವುದು

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿವೃತ್ತ ಪ್ರಾಚಾರ್ಯರೊಬ್ಬರಿಗೆ ನಡು ರಸ್ತೆಯಲ್ಲೇ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದ ಘಟನೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.


ಕೊಪ್ಪಳದ ನಿವೃತ್ತ ಪ್ರಾಚಾರ್ಯ ವಿ.ಬಿ.ರಡ್ಡೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಂದ ಧರ್ಮದೇಟು ತಿಂದ ವ್ಯಕ್ತಿ.

ಇವರು ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂಬ ಕಾರಣಕ್ಕೆ ಆಕ್ರೋಶಗೊಂಡ ಜನರು ರಡ್ಡೆಯವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಸುತ್ತುವರಿದು ಚಪ್ಪಲಿಯಲ್ಲಿ ಹೊಡೆದಿದ್ದು ಇದು ವ್ಯಾಪಕವಾಗಿ ಸುದ್ದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com