ಹಂಪಿ: ದಸರಾ ರೀತಿಯಲ್ಲಿಯೇ ರಾಜ್ಯದಲ್ಲಿ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರುಯಾಗಿ ಆಚರಿಸಲು ರಾಜ್ಯ ಸರ್ಕಾರ ಚಿಂತನ ನಡೆಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಪ್ರವಾಸೋದ್ಯಮ ಸಚಿವ ಸಿಟಿ ರವಿಯವರು, ಮೈಸೂರು ದಸರಾ ರೀತಿಯಲ್ಲಿಯೇ ಮುಂದಿನ ವರ್ಷ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ
ಧಾರ್ಮಿಕ ನಾಯಕರು ಹಾಗೂ ಇತಿಹಾಸ ತಜ್ಞರು, ಸ್ಥಳೀಯ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಿ ಈ ಉತ್ಸವಗಳ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಮುಂದಿನ ವರ್ಷದ ಕ್ಯಾಲೆಂಡರ್ ನಲ್ಲಿ ಹಂಪಿ ಉತ್ಸವ, ಚಾಲುಕ್ಯ ಉತ್ಸವ, ಕಲ್ಯಾಣ ಕರ್ನಾಟಕ ಉತ್ಸವ, ಮೈಸೂರು ದಸರಾ ಹಾಗೂ ಕಿತ್ತೂರು ಉತ್ಸವಗಳ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದಿದ್ದ ಸರ್ಕಾರ ವಾರ್ಷಿಕ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಹಂಪಿ ಉತ್ಸವ ಅಷ್ಟೇ ಅಲ್ಲದೆ, ಕರ್ನಾಟಕ ಹೈದರಾಬಾದ್ ಭಾಗ ಹಾಗೂ ವಿಜಯಪುರ ಭಾಗಗಳಲ್ಲಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
Advertisement