ಸಿಎಎ ಪೌರತ್ವ ನೀಡುತ್ತದೆ, ಕಾಂಗ್ರೆಸ್ ಜನರ ಹಾದಿತಪ್ಪಿಸುತ್ತಿದೆ: ಅನುರಾಗ್ ಠಾಕೂರ್ 

ಕಾಂಗ್ರೆಸ್ ಪಕ್ಷದ ನಾಯಕರು ದೇಶದ ಮುಸ್ಲಿಂ ಸಮುದಾಯವನ್ನು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.
ಅನುರಾಗ್ ಠಾಕೂರ್
ಅನುರಾಗ್ ಠಾಕೂರ್

ಬೆಳಗಾವಿ:ಕಾಂಗ್ರೆಸ್ ಪಕ್ಷದ ನಾಯಕರು ದೇಶದ ಮುಸ್ಲಿಂ ಸಮುದಾಯವನ್ನು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.


ಅವರು ನಿನ್ನೆ ಬೆಳಗಾವಿಯಲ್ಲಿ ಬಿಜೆಪಿ ಜನಸಂಪರ್ಕ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಕಾಯ್ದೆಯಲ್ಲಿ ಪೌರತ್ವ ಸಿಗುತ್ತದೆಯೋ ಹೊರತು ಕಸಿದುಕೊಳ್ಳುವುದಿಲ್ಲ ಎಂದರು.


2009ರಲ್ಲಿ ಬಂಧನ ಕೇಂದ್ರಗಳನ್ನು ಅಸ್ಸಾಂನಲ್ಲಿ ಸ್ಥಾಪಿಸಲಾಯಿತು. ಆಗ ಕಾಂಗ್ರೆಸ್ ಸರ್ಕಾರದಲ್ಲಿ ತರುಣ್ ಗೊಗೊಯ್ ಸಿಎಂ ಆಗಿದ್ದರು. ಅಂದು ಬಿಜೆಪಿ ಸರ್ಕಾರವಿರಲಿಲ್ಲ. ಈ ವಾಸ್ತವ ಬಹಿರಂಗವಾದ ನಂತರ ರಾಹುಲ್ ಗಾಂಧಿಯವರು ಸುಳ್ಳು ಹೇಳುವ ಕಲೆ ಕರಗತ ಮಾಡಿಕೊಂಡಿದ್ದಾರೆ. ದೇಶ ಬಿಟ್ಟು ವಿದೇಶಗಳಲ್ಲಿ ರಜೆ ಎಂದು ಮಜಾ ಮಾಡುತ್ತಿರುತ್ತಾರೆ ಎಂದರು.


ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ಕಾಪಾಡಲು ಸಿಎಎ ಆಗಿದೆ ಎಂದು ಠಾಕೂರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com