ನವದೆಹಲಿ: ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ
ನಾಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.
Advertisement