ಬೆಂಗಳೂರು: ತಮ್ಮ ಆತ್ಮ ರಕ್ಷಣೆಗಾಗಿ ಇಬ್ಬರು ರೌಡಿಶೀಟರ್ಗಳ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬಿಟಿಎಂ ಲೇಔಟ್ನ ರಂಕಾ ಕಾಲೋನಿ ಬಳಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ.
ಮಹೇಶ್ ಅಲಿಯಾಸ್ ಹಂದಿ ಮಹೇಶ್ ಮತ್ತು ಸತೀಶ್ ಎಂಬ ರೌಡಿ ಶೀಟರ್ ಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿ ಮಹೇಶ್ ವಿರುದ್ಧ 2 ಕೊಲೆ ಪ್ರಕರಣ ಸೇರಿ ಒಟ್ಟ 5 ಪ್ರಕರಣಗಳು ಹಾಗೂ ಸತೀಶ್ ವಿರುದ್ಧ 3 ಕೊಲೆ ಸೇರಿ 5 ಪ್ರಕರಣಗಳು ದಾಖಲಾಗಿದ್ದವು.
ಹೀಗಾಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸ್ ರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದರೂ, ಅವರು ಪೊಲೀಸ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು.
ಗಾಯಗೊಂಡ ರೌಡಿಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
Advertisement