ಬೆಂಗಳೂರು: ಜಿಂಕೆಗೆ ಬೈಕ್ ಡಿಕ್ಕಿಯಾಗಿ ಸವಾರ ಮತ್ತು ಜಿಂಕೆ ಎರಡು ಸಾವಿಗೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿ ಬಳಿ ನಡೆದಿದೆ.
ಹರೀಶ್ (21ವರ್ಷ) ಮೃತ ಬೈಕ್ ಸವಾರ. ಹರೀಶ್ ಸಹೋದರಿ ಇಂದಿರಾ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಬೆಳಗ್ಗೆ 5:30ರ ಸುಮಾರಿಗೆ ಅಕ್ಕನನ್ನು ಬಸ್ಗೆ ಡ್ರಾಪ್ ಮಾಡಿ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.
ಅಡ್ಡಬಂದ ಜಿಂಕೆಗೆ ಡಿಕ್ಕಿಯಾದ ಪರಿಣಾಮ ಹರೀಶ್ ಮೃತಪಟ್ಟಿದ್ದು, ಗಾಯಗೊಂಡ ಜಿಂಕೆಯೂ ಸಾವಿಗೀಡಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement