ಮೂರು ವಾಹನಗಳ ಡಿಕ್ಕಿ: ಓರ್ವ ವ್ಯಕ್ತಿ ಸಾವು, 7 ಮಂದಿಗೆ ಗಾಯ

ನಗರದ ಹೊರವಲಯದಲ್ಲಿ ಮಂಗಳವಾರ ನಡೆದ ಮೂರು ವಾಹನಗಳ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧಾರವಾಡ:  ನಗರದ ಹೊರವಲಯದಲ್ಲಿ ಮಂಗಳವಾರ ನಡೆದ ಮೂರು ವಾಹನಗಳ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಕಾರು ವ್ಯಾನ್ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು, ಈ ಘಟನೆಯಲ್ಲಿ ಮೃತಪಟ್ಟ  ವ್ಯಕ್ತಿಯನ್ನು ವ್ಯಾನ್ ಚಾಲಕ ಲಕ್ಷ್ಮಣ ಗೌಡ ಪಾಟೀಲ್ (35) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಧಾರವಾಡದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com