ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸಾವು

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪೆರಾಜೆ ಮಠದ ತಿರುವಿನಲ್ಲಿ ಕಳೆದ ರಾತ್ರಿ ಸಂಭವಿಸಿದೆ.
ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸಾವು

ಮಂಗಳೂರು: ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪೆರಾಜೆ ಮಠದ ತಿರುವಿನಲ್ಲಿ ಕಳೆದ ರಾತ್ರಿ ಸಂಭವಿಸಿದೆ.


ಕಲ್ಲಡ್ಕ ನಿವಾಸಿ ಕರೀಂ ಎಂಬವರ ಪುತ್ರ ಮುಹಮ್ಮದ್ ಅಜ್ಮಲ್ (19), ಮಾಣಿ ಬರೆನೆಕ್ಕರೆ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಪುತ್ರ ಪುತ್ತೂರು ಕಾಲೇಜು ವಿದ್ಯಾರ್ಥಿ ಪರೀಕ್ಷಿತ್ (19) ಮೃತರು ಎಂದು ಗುರುತಿಸಲಾಗಿದ್ದು, ಸ್ಥಳೀಯ ನಿವಾಸಿ ಪದ್ಮನಾಭ ಗೌಡ (28) ಗಂಭೀರ ಗಾಯಗೊಂಡಿದ್ದಾರೆ.


ಪರೀಕ್ಷಿತ್ ಹಾಗೂ ಪದ್ಮನಾಭ ಗೌಡ ಎಂಬವರು ಬೈಕ್ ನಲ್ಲಿ ಮಾಣಿ ಕಡೆಗೆ ತೆರಳಿದ್ದು, ಅಜ್ಮಲ್ ಆಕ್ಟೀವಾದಲ್ಲಿ ಕೊಡಾಜೆ ಕಡೆಗೆ ಹೋಗುತ್ತಿದ್ದಾಗ ಪೆರಾಜೆಯ ಮಠ ಎಂಬಲ್ಲಿ ನಾಯಿಯೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com