ಬೆಂಗಳೂರಿನಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು,‌ ಚಾಲಕ ಗಂಭೀರ

ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್‌ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್‌ವೇರ್‌ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್‌ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್‌ವೇರ್‌ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ರಾಜಾಜಿನಗರದ ಸರ್ಕಾರಿ ಸಾಬೂನು ಕಾರ್ಖಾನೆ ವೃತ್ತದ ಬಳಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟ ವ್ಯಕ್ತಿಯನ್ನು ಮಹಾಲಕ್ಷ್ಮೀಲೇಔಟ್‌ನ ಸಂತೋಷ್ (37) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕಾರು ಚಾಲಕ ಉಮೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಕೋಲಂಬೋ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ  ಸುಮಾರು 1.45ರ ವೇಳೆ ಮಹಾಲಕ್ಷ್ಮೀಲೇಔಟ್ ಕಡೆಗೆ ಸಾಗಲು ಸರ್ಕಾರಿ ಸಾಬೂನು ವೃತ್ತದ ಕಡೆಯಿಂದ ತೆರಳುತ್ತಿದ್ದಾಗ,
ಈ ವೇಳೆ ಅತಿ ವೇಗವಾಗಿ ಚಾಲನೆ ಮಾಡಿದ ಉಮೇಶ್ ಮುಂದಿನ ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಕಂಬಕ್ಕೆ ಅಪ್ಪಳಿಸಿದ್ದಾನೆ ಎನ್ನಲಾಗಿದೆ.
 
ಘಟನೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com