ಬೆಂಗಳೂರು: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಬಳಿಕ ಪತಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ಸೋಲೂರಿನ ಪಾರ್ವತಿ (35) ಕೊಲೆಯಾದವರು. ಆರೋಪಿ ಪತಿ ಸ್ವಾಮಿ ಮಾಗಡಿ ಪೊಲೀಸರಿಗೆ ಶರಣಾಗಿದ್ದಾನೆ.
ಪತಿ ಸ್ವಾಮಿ ಮುನಿಯಪ್ಪನ ಹಬ್ಬ ಇರುವುದರಿಂದ ಊರಿಗೆ ಹೋಗಿ ಬರೋಣ ಎಂದು ತನ್ನ ಪತ್ನಿಯನ್ನು ಹುಟ್ಟೂರಾದ ಅರಳೆಕಟ್ಟೆದೊಡ್ಡಿಗೆ ಕರೆದುಕೊಂಡು ಹೋಗಿದ್ದಾನೆ. ಅಂದೇ ಸಂಜೆ ಹೊಲಕ್ಕೆ ಕರೆದೊಯ್ದು ಮಾರಕಾಸ್ತ್ರದಿಂದ ತಲೆಗೆ ಹೊಡೆದಿದ್ದಾನೆ. ಬಳಿಕ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.
ಆರೋಪಿಯನ್ನು ಬಂಧಿಸಿರುವ ಪೋಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Advertisement