ಬೆಂಗಳೂರು: ರಾಜ್ಯ ಸರ್ಕಾರವು ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿಂದು ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸುವ ವಿಚಾರವಾಗಿ ಭೇಟಿಯಾದ ಅವರು, ಆದಷ್ಟು ಬೇಗ ಈ ಎರಡು ಸಂಘಟನೆಗಳಿಗೆ ನಿಷೇಧ ಹೇರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದರು.
ಸಿಎಎ ಪರವಾಗಿ ಡಿ.22ರಂದು ನಗರದ ಟೌನ್ ಹಾಲ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಫಾರ್ ಸಿಎಎ ಪ್ರತಿಭಟನೆಯಲ್ಲಿ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದಡಿ ಎಸ್ಡಿಪಿಐ ಪಕ್ಷದ ಆರು ಕಾರ್ಯಕರ್ತರನ್ನು ನಿನ್ನೆ ಬೆಂಗಳೂರಿನ ಪೊಲೀಸರು ಬಂಧಿಸಿದ್ದರು.
Advertisement