ಮಂಗಳೂರು: ಬೀಚ್ ನಲ್ಲಿ ಆಟವಾಡುತ್ತ ನೀರು ಪಾಲಾಗಿದ್ದ ನಾಲ್ವರ ರಕ್ಷಣೆ, ಯುವತಿ ಗಂಭೀರ

ಇಲ್ಲಿನ ಸುರತ್ಕಲ್ ಸಮೀಪದ ಎನ್ ಐಟಿಕೆ ಬೀಚಲ್ಲಿ ನೀರಾಟವಾಡುತ್ತಿದ್ದ ಸಂದರ್ಭದಲ್ಲಿ ನೀರು ಪಾಲಾಗಿದ್ದ ನಾಲ್ವರನ್ನು ಮೀನುಗಾರರು ರಕ್ಷಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಇಲ್ಲಿನ ಸುರತ್ಕಲ್ ಸಮೀಪದ ಎನ್ ಐಟಿಕೆ ಬೀಚಲ್ಲಿ ನೀರಾಟವಾಡುತ್ತಿದ್ದ ಸಂದರ್ಭದಲ್ಲಿ ನೀರು ಪಾಲಾಗಿದ್ದ ನಾಲ್ವರನ್ನು ಮೀನುಗಾರರು ರಕ್ಷಿಸಿದ್ದಾರೆ.

ದೋಣಿಯಲ್ಲಿದ್ದ ಮೀನುಗಾರರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದು, ಅಪಾಯದಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಈ ಪೈಕಿ ಒಬ್ಬ ಯುವತಿ ಗಂಭೀರ ಗಾಯಗೊಂಡಿದ್ದಾಳೆ.

ಆಂಧ್ರ ಮೂಲದ ವಿದ್ಯಾರ್ಥಿಗಳ ತಂಡ ವಿಹಾರಕ್ಕೆ ಆಗಮಿಸಿದ್ದು ಈ ವೇಳೆ ಸಮುದ್ರದ ಆಳದ ಅರಿವಿಲ್ಲದೆ ಇಳಿದಿದ್ದು ಅಲೆಗಳ ಹೊಡೆತಕ್ಕೆ ಸಿಲುಕಿ ನಾಲ್ವರು ಕೊಚ್ಚಿಹೋಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com