ಯಾದಗಿರಿ: ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ, ಜನರ ಆತಂಕ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇದ್ದ ಬ್ಯಾಗ್ ಪತ್ತೆಯಾದ ಬೆನ್ನಲ್ಲೇ ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದ್ದು, ಕೆಲ ಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. 
ಯಾದಗಿರಿ ಬಸ್ ನಿಲ್ದಾಣ
ಯಾದಗಿರಿ ಬಸ್ ನಿಲ್ದಾಣ

ಯಾದಗಿರಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇದ್ದ ಬ್ಯಾಗ್ ಪತ್ತೆಯಾದ ಬೆನ್ನಲ್ಲೇ ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದ್ದು, ಕೆಲ ಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. 

ಅಪರಿಚಿತ ವ್ಯಕ್ತಿಯೋರ್ವ ಬ್ಯಾಗ್ ಬಿಟ್ಟು ಹೋಗಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಹಾಗೂ ಶ್ವಾನದಳದಿಂದ ಬ್ಯಾಗ್ ತಪಾಸಣೆ ನಡೆಸಿದರು. ಬ್ಯಾಗ್ ನಲ್ಲಿ ಬಟ್ಟೆ, ಹಣ ಪತ್ತೆಯಾಗಿದ್ದು, ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಪ್ರಯಾಣಿಕರೊಬ್ಬರು ಬ್ಯಾಗ್ ಬಿಟ್ಟು ಹೋಗಿದ್ದರು ಎಂದು ನಂತರ ಮಾಹಿತಿ ದೊರೆತಿದೆ. 

ಇದಾದ ಕೆಲ ಹೊತ್ತಿನಲ್ಲಿ ನಗರದ ಅಜೀಜ್ ಕಾಲೋನಿಯ ಸನಾ ಮಸೀದಿ ಪಕ್ಕದಲ್ಲಿ ಮತ್ತೊಂದು ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಭೇಟಿ ನೀಡಿ ಅಲ್ಲಿಯೂ ಬ್ಯಾಗ್ ಪರಿಶೀಲನೆ ನಡೆಸಲಾಯಿತು. ಬ್ಯಾಗ್ ನಲ್ಲಿ ನೆಹರು ಶಾಲೆಯ ವಿದ್ಯಾರ್ಥಿ ಶೇಕ್ ಇಮ್ರಾನ್ ಹೆಸರಿನ ಐಡಿ ಕಾರ್ಡ್, ಪುಸ್ತಕ ಪತ್ತೆಯಾಗಿತ್ತು. 

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಯಾರೂ ಆತಂಕಪಡುವ ಅಗತ್ಯವಿಲ್ಲ. ಶಂಕಾಸ್ಪದ ವ್ಯಕ್ತಿ ಅಥವಾ ವಸ್ತು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com