ಬೀದರ್ : ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.
ವಾಹನದ ಟೈರ್ ಜೋಡಿಸುತ್ತಿದ್ದ ವೇಳೆ ಲಾರಿ ಹರಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅನ್ಸರ್ ಬಸಂತಪೂರ್ (32), ವಿಜಯ ಕುಮಾರ್ ಬಸಂತಪೂರ್ (24), ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ.
ಈ ಮೂವರು ಗೂಡ್ಸ್ ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಮನ್ನಾಎಖೇಳಿ ಕಡೆಗೆ ಹೊರಟಿದ್ದರು. ಈ ವೇಳೆ ವಾಹನದ ಟೈರ್ ಪಂಕ್ಚರ್ ಆಗಿದ್ದರಿಂದ ಮಿನಕೇರಾ ಪ್ಲೈಓವರ್ ಮೇಲೆ ಮತ್ತೊಂದು ಟೈರ್ ಜೋಡಣೆ ಮಾಡುತ್ತಿದ್ದರು. ಈ ವೇಳೆ ಲಾರಿ ಹರಿದು ಘಟನೆ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸ ಠಾಣೆಯ ಸಿಪಿಐ ಸಾವಳಗಿ ಹಾಗೂ ಬಗದಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement