ಸುಳ್ಯ ಬಳಿ ರಸ್ತೆ ಅಪಘಾತ: ಉತ್ತರ ಪ್ರದೇಶ ಮೂಲದ ಇಬ್ಬರು ಸಾವು

ಸುಳ್ಯ ತಾಲ್ಲೂಕಿನ ಅಜ್ಜವಾರ ಗ್ರಾಮದ ಮೆನಾಲ ಸಮೀಪ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದಕ್ಷಿಣ ಕನ್ನಡ: ಸುಳ್ಯ ತಾಲ್ಲೂಕಿನ ಅಜ್ಜವಾರ ಗ್ರಾಮದ ಮೆನಾಲ ಸಮೀಪ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. 

ಮೃತಪಟ್ಟವರನ್ನು ಉತ್ತರ ಪ್ರದೇಶದ ಮುಜಾಫರ್ ನಗರದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೆನಾಲದಿಂದ ಸುಳ್ಯ ಕಡೆಗೆ ಕಲ್ಲು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರೂ ಸವಾರರು ರಸ್ತೆಗೆ ಬಿದ್ದು ತಕ್ಷಣವೇ ಸಾವನ್ನಪ್ಪಿದ್ದಾರೆ. 

ಮೃತರು ಮೆನಾಲದಲ್ಲಿ ವ್ಯಕ್ತಿಯೊಬ್ಬರ ಬಳಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com