ಹಳೆ ದ್ವೇಷದ ಹಿನ್ನೆಲೆ: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಾನುಕುಂಟೆ ಮಾದಾಪುರ ರಸ್ತೆಯಲ್ಲಿ ರಾಜಾನುಕುಂಟೆ ಗ್ರಾಮದ ಸಂತೋಷ್ ಕುಮಾರ್ (25) ಕೊಲೆಯಾದವರು. ಇವರ ಮೇಲೆ ನಾಲ್ಕೈದು ಮಂದಿಯಿಂದ ಗುಂಪು ಹಲ್ಲೆ ಮಾಡಿ ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಿದೆ. 

ಈ ಘಟನೆಯಲ್ಲಿ ಸಂತೋಷ್ ಕುಮಾರ್  ಸ್ನೇಹಿತನ ಕೈಬೆರಳು ಸಹ ತುಂಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದ  ಸಂತೋಷ್ ಕುಮಾರ್ ಹಿಂದೆ ತನ್ನ ಸ್ನೇಹಿತನಾದ ರೌಡಿಶೀಟರ್ ಹರಿಕೆರೆ ವೇಣು ಮೇಲೆ ಹಲ್ಲೆ ಮಾಡಿದ್ದನು. ಈ ಪ್ರಕರಣದಲ್ಲಿ ಹಲ್ಲೆಗೊಳಗಾದ ವೇಣು ಆಸ್ಪತ್ರೆಗೆ ದಾಖಲಾಗಿ ಬದುಕುಳಿದಿದ್ದ. 

ಇತ್ತ ಹಲ್ಲೆ ಮಾಡಿದ ಸಂತೋಷ್ ಕುಮಾರ್ ಜೈಲುವಾಸ ಅನುಭವಿಸಿ ಹೊರಗಡೆ  ಬಂದಿದ್ದನು. ಹೀಗಾಗಿ ರೌಡಿಶೀಟರ್ ವೇಣು ತನ್ನ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ  ಕೃತ್ಯವನ್ನು ಮಾಡಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಾಜನಕುಂಟೆ ಪೊಲೀಸರು ಕೊಲೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. 

ಮತ್ತೊಂದೆಡೆ ಮೃತನ ಸಂಬಂಧಿಕರು ರೌಡಿಶೀಟರ್ ವೇಣು ಹಾಗೂ ಆತನ ತಂದೆ ಸೇರಿ ಸಂತೋಷ್ ನನ್ನ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com