ಚನ್ನಪಟ್ಟಣ: ಮಂಗಳೂರಿನ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಿಣಿ ಮಿಣಿ ಪೌಡರ್ ಉಲ್ಲೇಖ ಮಾಡಿದ್ದ ವಿಡಿಯೋವನ್ನು ಟ್ರೋಲ್ ಮಾಡಿ ವೈರಲ್ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಿಣಿ ಮಿಣಿ ಪೌಡರ್ ಹೇಳಿಕೆಯನ್ನು ಬಿಜೆಪಿ ಕಾರ್ಯಕರ್ತರೇ ಟ್ರೋಲ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಮಿಣಿ ಮಿಣಿ ಪೌಡರ್ ಹೇಳಿಕೆಯನ್ನು ಟ್ರೋಲ್ ಮಾಡಿರುವುದು ವಿಕೃತ ಮನೋಭಾವ, ಈ ಮೂಲಕ ಅವರಲ್ಲಿರುವ ಆಲೋಚನೆಗಳು ವ್ಯಕ್ತವಾಗುತ್ತಿದೆ. ನಾನು ಜೀವನದಲ್ಲಿ ತಪ್ಪು ಮಾಡಿಲ್ಲ, ತಪ್ಪು ಮಾಡಿದರೆ ಮುಕ್ತವಾಗಿ ಹೇಳುತ್ತೇನೆ. ನನ್ನ ಬಗ್ಗೆ ಕೀಳಾಗಿ ಟ್ರೋಲ್ ಮಾಡಿ ವೈರಲ್ ಮಾಡುತ್ತಿದ್ದಾರೆ, ಇದು ಬಿಜೆಪಿ ಸಂಸ್ಕೃತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಇವರ ಪ್ರಮಾಣ ಪತ್ರ ಯಾಕೆ ಬೇಕು? ಬಾಂಬ್ ಪ್ರಕರಣದಲ್ಲಿ ಮಾಧ್ಯಮಗಳನ್ನು ದಾರಿತಪ್ಪಿಸಲಾಯಿತು. ಅದರಲ್ಲಿ ಸಲ್ಫರ್ ಪೌಡರ್ ಇತ್ತು ಎಂಬುದನ್ನು ಅಧಿಕಾರಿಗಳೇ ಹೇಳಿದ್ದು ವರದಿಯಾಗಿದೆ ಎಂದು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.
Advertisement