ಬಂಡೀಪುರ: ಬಂಡೀಪುರ ರಾಷ್ಟ್ರಿಯ ಉದ್ಯಾನವನದಲ್ಲಿ ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಜನಿಕಾಂತ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತಾರಾಷ್ಟ್ರೀಯ ಖ್ಯಾತಿಯ ಮ್ಯಾನ್ ವರ್ಸಸ್ ವೈಲ್ಡ್ ಸರಣಿ ಸಾಕ್ಷ್ಯಚಿತ್ರ ತಯಾರಕ, ಇಂಗ್ಲೆಂಡ್ ಮೂಲದ ಸಾಹಸಿಗ ಬೇರ್ ಗ್ರಿಲ್ಸ್ ಮತ್ತು ಅವರ ತಂಡದ ಜೊತೆ ರಜನಿಕಾಂತ್ ಅವರು ಸಾಕ್ಷ್ಯಚಿತ್ರ ಶೂಟಿಂಗ್ ನಲ್ಲಿ ನಿರತರಾಗಿದ್ದರು. ರಜನಿಕಾಂತ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಈ ದಿನದ ಶೂಟಿಂಗ್ ನ್ನು ಸ್ಥಗಿತಗೊಳಿಸಲಾಗಿದೆ.
ಅಗತ್ಯ ಅನುಮತಿ ಪಡೆಯದೇ, ಡ್ರೋಣ್ ಬಳಕೆ ಮಾಡಿದ್ದಕ್ಕಾಗಿ ಕರ್ನಾಟಕ ಅರಣ್ಯ ಇಲಾಖೆ ಮ್ಯಾನ್ ವರ್ಸಸ್ ವೈಲ್ಡ್ ತಂಡದಿಂದ ವಿವರಣೆ ಕೇಳಿದೆ.
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು ಜಾಗತಿಕ ಮಟ್ಟದಲ್ಲಿ ಈ ಕಾರ್ಯಕ್ರಮ ಅತಿ ಹೆಚ್ಚು ವೀಕ್ಷಿಸಲ್ಪಟ್ಟಿತ್ತು.
Advertisement