ಬೆಂಗಳೂರು: ಗಾಂಧಿಯನ್ನು ಕೊಂದವರೆ.. ಗೌರಿಯನ್ನು ಕೊಂದವರೆ.. ಕೊಲ್ಲ ಬಲ್ಲಿರಿ ನನ್ನನ್ನೂ. ಕೊಲ್ಲಬಲ್ಲಿರಿ ನನ್ನನ್ನೂ..ನನ್ನಂತ ಇನ್ನೂ ಹಲವರನ್ನೂ. ಆದರೆ, ಕೊಲ್ಲಲಾರಿರಿ.. ನಮ್ಮ ಮನಃಸಾಕ್ಷಿಯನ್ನು..ನಮ್ಮ ಸಂವಿಧಾನವನ್ನು..ಎಲ್ಲರನ್ನೊಳಗೊಂಡ ಭಾರತೀಯತೆಯನ್ನು..” ಎಂದು ಟ್ವಿಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಬೆದರಿಕೆ ಪತ್ರಕ್ಕೆ ತಿರುಗೇಟು ನೀಡಿದ್ದಾರೆ.
ಇದೇ ತಿಂಗಳು 24ರಂದು ಬೆಳಗಾವಿಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರ ಮಠಕ್ಕೆ ದಾವಣಗೆರೆಯ ಅಪರಿಚಿತ ವ್ಯಕ್ತಿಯೋರ್ವನಿಂದ ಬೆದರಿಕೆ ಪತ್ರವೊಂದು ರವಾನೆಯಾಗಿತ್ತು.
ಪತ್ರದಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ನಮೂದಾದ ಹಿನ್ನೆಲೆಯಲ್ಲಿ ಇಂದು ಅವರು ಟ್ವಿಟ್ ಮಾಡುವ ಮೂಲಕ ಉತ್ತರಿಸಿದ್ದಾರೆ.
Advertisement