ವಿಧಾನಸಭೆ ಕಾರ್ಯದರ್ಶಿಯಾಗಿ ಎಸ್.ಮೂರ್ತಿ ಮರು ನೇಮಕ: ಹೈಕೋರ್ಟ್ ಆದೇಶ

ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅವರನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ‌ವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಎಸ್. ಮೂರ್ತಿ
ಎಸ್. ಮೂರ್ತಿ

ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅವರನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ‌ವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಮಂಡಳಿಯ ಆದೇಶ ನಿಯಮಕ್ಕೆ ಅನುಗುಣವಾಗಿಲ್ಲ. ಆದ್ದರಿಂದ ಅಮಾನತು ಆದೇಶ ರದ್ದುಗೊಳಿಸಲಾಗಿದೆ. ಈಗ ಶಿಸ್ತುಕ್ರಮ ವಿಚಾರಣಾ‌ ಸಮಿತಿಯ ತನಿಖೆಯ ಅಂತಿಮ ಫಲಿತಾಂಶಕ್ಕೆ ಒಳಪಟ್ಟು ಅವರನ್ನು ಮೂರು ವಾರದೊಳಗೆ ಮರು ನೇಮಕ‌ ಮಾಡಬೇಕು ಎಂದು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೂಚಿಸಿದೆ.

ಅಮಾನತು ಆದೇಶ ರದ್ದುಪಡಿಸುವಂತೆ ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿ ಸಲ್ಲಿಸಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com