ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೋನಾ ಆಂಬುಲೆನ್ಸ್ ಮತ್ತು ಮೃತದೇಹ ಸಾಗಿಸುವ ವಾಹನಗಳ ವ್ಯವಸ್ಥೆ ನೋಡಿಕೊಳ್ಳಲು ಮೂವರು ಹಿರಿಯ ಅಧಿಕಾರಿಗಳ ತಂಡವನ್ನು ರಚಿಸಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ಈ ತಂಡದಲ್ಲಿ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇ ಗೌಡ, ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ, ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿ ವಿಜಯೇಂದ್ರ ಸದಸ್ಯರಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಬ್ಯುಲೆನ್ಸ್ ಕೊರತೆ ಆರೋಪ ಹಾಗೂ ಮೃತದೇಹಗಳ ಸಾಗಣೆ ವೇಳೆ ಲೋಪ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ತಂಡ ರಚಿಸಲಾಗಿದೆ.
Advertisement