ಮೀನು ಸ್ವಚ್ಛ ಮಾಡಲು ಹೋದ ಯುವಕ ನೀರುಪಾಲು

ಮೀನು ಸ್ವಚ್ಛ ಮಾಡಲು ಹೋದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಗುಳ್ಳೆಬೋರನ ಕೆರೆ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ: ಮೀನು ಸ್ವಚ್ಛ ಮಾಡಲು ಹೋದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಗುಳ್ಳೆಬೋರನ ಕೆರೆ ಬಳಿ ನಡೆದಿದೆ.

ಚಾಪುರದೊಡ್ಡಿ ಗ್ರಾಮದ ಮಹದೇವ (೨೪) ಮೃತ ಯುವಕ. ಸ್ನೇಹಿತರ ಜೊತೆ ಮೀನುಗಳನ್ನು ಸ್ವಚ್ಛಗೊಳಿಸಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತ ದೇಹದ ಶೋಧ ಕಾರ್ಯ ನಡೆಸುತ್ತಿದ್ದಾರೆ..ಈ ಘಟನೆ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿ:ನಾಗಯ್ಯ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com