ರಾಜ್ಯದಲ್ಲಿ ಇಂದು ಕೊರೋನಾಗೆ 17 ಬಲಿ, ಬೆಂಗಳೂರಿನಲ್ಲಿ 1373 ಸೇರಿ 2228 ಮಂದಿಗೆ ಪಾಸಿಟಿವ್, 957 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ 17 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 487ಕ್ಕೇರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ 17 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 487ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1373 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2228 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,105ಕ್ಕೇರಿಕೆಯಾಗಿದೆ. ಈ ಪೈಕಿ 12833 ಮಂದಿ ಗುಣಮುಖರಾಗಿದ್ದು, 450 ಮಂದಿ ಮೃತಪಟ್ಟಿದ್ದಾರೆ. ಸದ್ಯ 17,782 ಸಕ್ರಿಯ ಪ್ರಕರಣಗಳಿದ್ದು, 457 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ ಒಂದೇ ದಿನ 957 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಂದು 606 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ 1373, ದಕ್ಷಿಣ ಕನ್ನಡದಲ್ಲಿ 167, ಕಲಬುರಗಿಯಲ್ಲಿ 85, ಧಾರವಾಡದಲ್ಲಿ 75, ಮೈಸೂರಿನಲ್ಲಿ 52, ಬಳ್ಳಾರಿಯಲ್ಲಿ 41, ದಾವಣಗೆರೆಯಲ್ಲಿ 40, ಶಿವಮೊಗ್ಗದಲ್ಲಿ 37, ಬಾಗಲಕೋಟೆಯಲ್ಲಿ 36, ಕೋಲಾರದಲ್ಲಿ 34, ಚಿಕ್ಕಬಳ್ಳಾಪುರದಲ್ಲಿ 32 ಪ್ರಕರಣಗಳು ವರದಿಯಾಗಿವೆ.

ತುಮಕೂರಿನಲ್ಲಿ 27, ಮಂಡ್ಯದಲ್ಲಿ 24, ಉತ್ತರಕನ್ನಡದಲ್ಲಿ 23, ಉಡುಪಿಯಲ್ಲಿ 22, ಹಾಸನದಲ್ಲಿ 18, ರಾಮನಗರದಲ್ಲಿ 17, ಯಾದಗಿರಿಯಲ್ಲಿ 16, ರಾಯಚೂರು, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 16, ಬೀದರ್‌ ನಲ್ಲಿ 15, ಚಾಮರಾಜನಗರದಲ್ಲಿ 12, ಬೆಳಗಾವಿಯಲ್ಲಿ 9, ಗದಗದಲ್ಲಿ 6, ಚಿಕ್ಕಮಗಳೂರಿನಲ್ಲಿ 5, ಕೊಡಗಿನಲ್ಲಿ 4, ಕೊಪ್ಪಳ, ಚಿತ್ರದುರ್ಗದಲ್ಲಿ ತಲಾ 2, ವಿಜಯಪುರದಲ್ಲಿ 1 ಪ್ರಕರಣ ವರದಿಯಾಗಿದೆ.

ರಾಯಚೂರಿನಲ್ಲಿ 1, ಧಾರವಾಡದಲ್ಲಿ 8, ಉತ್ತರಕನ್ನಡದಲ್ಲಿ 1, ಹಾಸನದಲ್ಲಿ 2, ಕಲಬುರಗಿಯಲ್ಲಿ 1, ಮೈಸೂರಿನಲ್ಲಿ 2, ತುಮಕೂರಿನಲ್ಲಿ 1, ದಾವಣಗೆರೆಯಲ್ಲಿ 1 ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com