ಬಳ್ಳಾರಿಯಲ್ಲಿ ಕ್ಯಾಮೆರಾ ಮ್ಯಾನ್ ಗೆ ಕೊರೊನಾ; ಪತ್ರಕರ್ತರಿಗೆ ಕ್ವಾರಂಟೈನ್‌

ಬಳ್ಳಾರಿಯಲ್ಲಿ ಎಲೆಕ್ಟ್ರಾನಿಕ್ ಮಿಡಿಯಾದ ಕ್ಯಾಮಾರಮ್ಯಾನ್ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತವಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಳ್ಳಾರಿ: ಬಳ್ಳಾರಿಯಲ್ಲಿ ಎಲೆಕ್ಟ್ರಾನಿಕ್ ಮಿಡಿಯಾದ ಕ್ಯಾಮಾರಮ್ಯಾನ್ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತವಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇತ್ತೀಚೆಗೆ ಪತ್ರಿಕಾ ದಿನಾಚರಣೆಗೆ ಸಂಬಂಧಿಸಿದಂತೆ ಪತ್ರಿಕಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ‌ ಕ್ಯಾಮೆರಾಮ್ಯಾನ್ ಭಾಗವಹಿಸಿದ್ದರು. ಹೀಗಾಗಿ ಈ ಸಭೆಯಲ್ಲಿ‌ ಭಾಗವಹಿಸಿದ ಎಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಸೆಲ್ಪ್ ಕ್ವಾರಂಟೈನ್ ಗೆ ಒಳಗಾಗುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ಖಡಕ್ ಸೂಚನೆ ನೀಡಿದ್ದಾರೆ.

ಅಲ್ಲದೇ, 5 ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಒಳಗಾದ ನಂತರ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಸ್ವ್ಯಾಬ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com