ರಾಜ್ಯದಲ್ಲಿ ಇಂದು ಕೊರೋನಾಗೆ 73 ಬಲಿ, ಬೆಂಗಳೂರಿನಲ್ಲಿ 1315 ಸೇರಿ 2738 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 73 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 757ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 73 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 757ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 71 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1315 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 2738 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,581ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 839 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 16248 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 24572 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 545 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 1315 ಮಂದಿ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19702ಕ್ಕೇರಿಕೆಯಾಗಿದೆ. ಯಾದಗಿರಿಯಲ್ಲಿ 162, ಮೈಸೂರಿನಲ್ಲಿ 151, ದಕ್ಷಿಣ ಕನ್ನಡದಲ್ಲಿ 131, ಬಳ್ಳಾರಿಯಲ್ಲಿ 106, ಕಲಬುರಗಿಯಲ್ಲಿ 89, ವಿಜಯಪುರದಲ್ಲಿ 86, ಶಿವಮೊಗ್ಗದಲ್ಲಿ 74, ಉಡುಪಿಯಲ್ಲಿ 53, ತುಮಕೂರಿನಲ್ಲಿ 48, ರಾಯಚೂರು, ದಾವಣಗೆರೆಯಲ್ಲಿ ತಲಾ 45 ಪ್ರಕರಣಗಳು ವರದಿಯಾಗಿವೆ.

ಚಿಕ್ಕಬಳ್ಳಾಪುರದಲ್ಲಿ 42, ಉತ್ತರಕನ್ನಡದಲ್ಲಿ 37, ಬಾಗಲಕೋಟೆಯಲ್ಲಿ 37, ಕೊಪ್ಪಳದಲ್ಲಿನ 31, ಮಂಡ್ಯದಲ್ಲಿ 30, ಕೊಡಗಿನಲ್ಲಿ 29, ಬೆಳಗಾವಿಯಲ್ಲಿ 27, ಹಾಸನದಲ್ಲಿ 25, ಬೀದರ್‌ನಲ್ಲಿ 23, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲಿ ತಲಾ 21, ಚಿಕ್ಕಮಗಳೂರಿನಲ್ಲಿ 10, ಚಾಮರಾಜನಗರದಲ್ಲಿ 9, ಚಿತ್ರದುರ್ಗದಲ್ಲಿ 8, ಗದಗ, ಹಾವೇರಿಯಲ್ಲಿ ತಲಾ 6 ಪ್ರಕರಣಗಳು ವರದಿಯಾಗಿವೆ.

ಇನ್ನು ಬೆಂಗಳೂರಿನಲ್ಲಿ ಒಟ್ಟು 47 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ 3, ಕೊಡಗಿನಲ್ಲಿ 2, ಮೈಸೂರಿನಲ್ಲಿ 7, ಬಾಗಲಕೋಟೆಯಲ್ಲಿ 2, ಬೆಳಗಾವಿ, ಗದಗ, ಧಾರವಾಡದಲ್ಲಿ 6, ಹಾವೇರಿಯಲ್ಲಿ 1, ತುಮಕೂರಿನಲ್ಲಿ 1, ಉತ್ತರಕನ್ನಡದಲ್ಲಿ 1 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com