ಕಲಬುರಗಿ: ಕೊರೊನಾ ಹಾವಳಿಯಿಂದಾದ ಎರಡು ಪ್ರಮುಖ ಕಾರಣಗಳಿಂದ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಡಾ. ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
ಕೊವೀಡ್ -19 ದೇಶ ಸೇರಿದಂತ ರಾಜ್ಯದಲ್ಲಿ ವ್ಯಾಪಿಸಿದ್ದರಿಂದ ಒಂದು ಕಡೆ ಸಾರ್ವಜನಿಕರು ಕೂಲಿ ಕಾರ್ಮಿಕರು ಸೇರಿ ಹಲವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಮತ್ತೊಂದೆಡೆ ಸಾವಿರಾರು ಸಂಖ್ಯೆಯ ಸೋಂಕಿತರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.
ಪ್ರತಿವರ್ಷ ನನ್ನ ಜನ್ಮದಿನಕ್ಕೆ ಸಮಯದಲ್ಲಿ ಬಂದು ನೀವೆಲ್ಲ ಆಶೀರ್ವಾದ ನೀಡಿದ್ದೀರಿ. ಆದರೆ, ಈ ಸಲ ಕೋವಿಡ್ನಿಂದಾಗಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಬೆಂಗಳೂರು ನಗರದಲ್ಲಿ ಜುಲೈ 22ರ ವರೆಗೆ ಲಾಕ್ಡೌನ್ ಜಾರಿಯಾಗಿರುವ ಕಾರಣ ಇದೇ ಜುಲೈ 21ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಈ ಸಲ ನನ್ನ ಹುಟ್ಟುಹಬ್ಬ ಆಚರಿಸುವ ಬದಲು ಸೋಂಕಿತರ ಕುಟುಂಬದವರಿಗೆ ನೆರವಾಗಬೇಕೆಂದು ಖರ್ಗೆ ಅವರು ಮನವಿ ಮಾಡಿದ್ದಾರೆ.
Advertisement