ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರೀರಾಮುಲು ಹೇಳಿಕೆ: ಡಿಕೆಶಿ ವಾಗ್ದಾಳಿ

ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಹೆಚ್ಚಾಗುತ್ತಿರುವ ರಾಜ್ಯವನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ.
ಶ್ರೀರಾಮುಲು, ಡಿಕೆ ಶಿವಕುಮಾರ್
ಶ್ರೀರಾಮುಲು, ಡಿಕೆ ಶಿವಕುಮಾರ್

ಬೆಂಗಳೂರು: ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಹೆಚ್ಚಾಗುತ್ತಿರುವ ರಾಜ್ಯವನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದ
ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ.

ಆರೋಗ್ಯ ಸಚಿವರ ಹೇಳಿಕೆ ವಿರೋಧಿಸಿ ರಾಜ್ಯಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,
ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವರು ಹೇಳುತ್ತಿರುವುದು ಕೋವಿಡ್ ಬಿಕ್ಕಟ್ಟು ನಿರ್ವಹಣೆಯಲ್ಲಿ ಬಿಜೆಪಿ
ಸರ್ಕಾರದ ವೈಫಲ್ಯವನ್ನು ತೋರಿಸುತ್ತಿದೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಆಗದಿದ್ದರೆ ಇಂತಹ ಸರ್ಕಾರ ನಮ್ಮಗೆ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ.ಈ ಸರ್ಕಾರದ ಅಸಮರ್ಥತೆಯು ನಾಗರಿಕರನ್ನು ದೇವರ ಕರುಣೆಗೆ ಬಿಟ್ಟಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಜನರು ಸಹಕಾರ ನೀಡಿದರೆ ಮಾತ್ರ ದೇವರು ನಮ್ಮನ್ನು ಕಾಪಾಡಲು ಸಾಧ್ಯ ಎಂಬರ್ಥದಲ್ಲಿ ಹೇಳಿಕೆ ನೀಡಿರುವುದಾಗಿ 
ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com