ಶಿವಮೊಗ್ಗ: ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
30 ವರ್ಷದ ಗೋಂದಿಚಟ್ನಳ್ಳಿ ನಿವಾಸಿ ನವೀನ್, ವಿಜಯ್ (33) ಮೃತ ಬೈಕ್ ಸವಾರರು.
ಬೈಕ್ ಸವಾರರು ಉಂಬ್ಳೆಬೈಲಿಗೆ ಸಾಗುತ್ತಿದ್ದಾಗ ತುಂಗಾ ಸೇತುವೆ ಕಡೆಯಿಂದ ತೆರಳುತ್ತಿದ್ದ ಬೈಕ್, ಭದ್ರಾವತಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತವಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement