ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಮುಲೆಪೆಟ್ಲುನಲ್ಲಿ ಶುಕ್ರವಾರ ಬೆಳಗ್ಗೆ ತಂದೆ ಮತ್ತು ಮಗ ನೀರಿನ ಟ್ಯಾಂಕ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಸುರೇಶ್ (45) ಮತ್ತು ಆತನ ಮಗ ವಿಕಾಸ್ (16) ಎಂದು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಮ್ಮ ಸಾಕು ಪ್ರಾಣಿಗಳನ್ನು ತೊಳೆಯುವಾಗ ಇಬ್ಬರೂ ಜಾರಿಬಿದ್ದು ಟ್ಯಾಂಕ್ನಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಈಜುಗಾರರ ಸಹಾಯದಿಂದ ಶವಗಳನ್ನು ಟ್ಯಾಂಕ್ ನಿಂದ ಹೊರತೆಗೆದಿದ್ದಾರೆ.
ಮರಣೋತ್ತರ ಪರೀಕ್ಷೆ ನಂತರ ಪೊಲೀಸರು ಶವಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.
ಈ ಸಂಬಂಧ ಕೆ ಆರ್ ನಗರ ಪೊಲೀಸ್ ಠಾಣೆಯಲಲಿ ಪ್ರಕರಣ ದಾಖಲಾಗಿದೆ.
Advertisement