ಬೆಂಗಳೂರು: ಕಾರ್ಗಿಲ್ ವಿಜಯ ದಿನದ ಅಂಗವಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುತಾತ್ಮ ಯೋಧರ ತ್ಯಾಗವನ್ನು ಸ್ಮರಿಸಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ಮಾಡಿ, ಯುದ್ಧ ಎಂದೆಂದೂ ನಡೆಯದಿರಲಿ, ಸೈನಿಕರ ಮನೆಯಲ್ಲಿಸಾವಿನ ರೋದನ ಕೇಳದಿರಲಿ,
ವಿಶ್ವದಲ್ಲಿ ಶಾಂತಿ-ಸಹಬಾಳ್ವೆ ಸದಾ ನೆಲೆಸಿರಲಿ.ಹುತಾತ್ಮ ವೀರಯೋಧರಿಗೆ ನನ್ನ ಗೌರವಪೂರ್ವಕ ಶ್ರದ್ಧಾಂಜಲಿ. ಹುತಾತ್ಮರ
ಕುಟುಂಬಕ್ಕೆ ನನ್ನ ನಮನ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ಇಂದು ಕಾರ್ಗಿಲ್ ವಿಜಯ ದಿವಸ. ಇದು ಭಾರತದ ದಿಗ್ವಿಜಯದ
ದಿನವೂ ಹೌದು. ಸವಾಲುಗಳ ನಡುವೆಯೂ ಸಾಹಸ ಮೆರೆದ ಭಾರತೀಯ ಸಶಸ್ತ್ರ ಪಡೆಗಳ ಬಲಿದಾನವನ್ನು ನಾನು ಹೆಮ್ಮೆಯಿಂದ
ಸ್ಮರಿಸುತ್ತೇನೆ. ದೇಶಕ್ಕಾಗಿ ಮಡಿದ ಯೋಧರ ಕುಟುಂಬಗಳ ತ್ಯಾಗವನ್ನು ಮನಃಪೂರ್ವಕವಾಗಿ ಗೌರವಿಸುತ್ತೇನೆ.
ಜೈ ಹಿಂದ್ ಎಂದು ಹೇಳಿದ್ದಾರೆ.
Advertisement