ಸಂಸತ್ ಅಧಿವೇಶನದ ನಂತರ ವಿಧಾನಸಭೆ ಅಧಿವೇಶನ: ಸಚಿವ ಜೆ.ಸಿ. ಮಾಧುಸ್ವಾಮಿ

ಕೊರೋನಾ ಸಂದರ್ಭದಲ್ಲಿ ಸಂಸತ್ ಅಧಿವೇಶನವನ್ನು ಹೇಗೆ ನಡೆಸುತ್ತಾರೆ ಎಂಬುದನ್ನು ನೋಡಿಕೊಂಡು ಸೆಪ್ಟಂಬರ್‌ನಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ

ತುಮಕೂರು: ಕೊರೋನಾ ಸಂದರ್ಭದಲ್ಲಿ ಸಂಸತ್ ಅಧಿವೇಶನವನ್ನು ಹೇಗೆ ನಡೆಸುತ್ತಾರೆ ಎಂಬುದನ್ನು ನೋಡಿಕೊಂಡು ಸೆಪ್ಟಂಬರ್‌ನಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ನಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಲೋಕಸಭೆ ಅಧಿವೇಶನ ಮುಗಿದ ನಂತರವಷ್ಟೇ ವಿಧಾನಸಭೆ ಅಧಿವೇಶನ ನಡೆಸುವುದಾಗಿ ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಪಾರ್ಲಿಮೆಂಟ್ ಅಧಿವೇಶನ ಹೇಗೆ ನಡೆಯುತ್ತದೆ ಎಂಬುದನ್ನು ನೋಡಿಕೊಂಡು ಇಲ್ಲಿ ಅಧಿವೇಶನ ನಡೆಸಬೇಕೆಂಬ ತೀರ್ಮಾನ ಮಾಡಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com