ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೋನಾ ಸಂಖ್ಯೆ, ಇಂದು ಬೆಂಗಳೂರಿನಲ್ಲಿ 1470 ಸೇರಿ 5324 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ಸೋಮವಾರ ರಾಜ್ಯದಲ್ಲಿ ಒಟ್ಟು 5324 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,01,465ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಹಾಮಾರಿಗೆ ಇಂದು 75 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1470 ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಈ ನಡುವೆ, ಕಳೆದ 24 ಗಂಟೆಗಳಲ್ಲಿ 1847 ಮಂದಿ ಸಂಪೂರ್ಣ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 37685 ಮಂದಿ ಚೇತರಿಸಿಕೊಂಡಂತಾಗಿದೆ. ಸದ್ಯ ರಾಜ್ಯದಲ್ಲಿ ಒಟ್ಟು 61,819 ಸಕ್ರಿಯ ಪ್ರಕರಣಗಳಿದ್ದು, 598 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಳಿದಂತೆ ಬಳ್ಳಾರಿಯಲ್ಲಿ 840, ಕಲಬುರಗಿಯಲ್ಲಿ 631, ಮೈಸೂರಿನಲ್ಲಿ 296, ಉಡುಪಿಯಲ್ಲಿ 225, ಧಾರವಾಡದಲ್ಲಿ 193, ಬೆಳಗಾವಿಯಲ್ಲಿ 155, ಕೋಲಾರದಲ್ಲಿ 142, ಬೆಂಗಳೂರು ಗ್ರಾಮಾಂತರದಲ್ಲಿ 138 138, ರಾಯಚೂರಿನಲ್ಲಿ 120, ದಕ್ಷಿಣ ಕನ್ನಡದಲ್ಲಿ 119, ವಿಜಯಪುರ, ದಾವಣಗೆರೆಯಲ್ಲಿ ತಲಾ 110 ಪ್ರಕರಣಗಳು ವರದಿಯಾಗಿವೆ.

ತುಮಕೂರಿನಲ್ಲಿ 89, ಶಿವಮೊಗ್ಗದಲ್ಲಿ 76, ಹಾಸನದಲ್ಲಿ 66, ಯಾದಗಿರಿಯಲ್ಲಿ 64, ಗದಗದಲ್ಲಿ 63, ರಾಮನಗರದಲ್ಲಿ 62, ಮಂಡ್ಯದಲ್ಲಿ 56, ಚಿತ್ರದುರ್ಗದಲ್ಲಿ 51, ಬೀದರ್‌ನಲ್ಲಿ 42, ಚಿಕ್ಕಬಳ್ಳಾಪುರದಲ್ಲಿ 40, ಉತ್ತರಕನ್ನಡದಲ್ಲಿ 32, ಕೊಪ್ಪಳದಲ್ಲಿ 28, ಬಾಗಲಕೋಟೆ, ಹಾವೇರಿಯಲ್ಲಿ ತಲಾ 27, ಚಿಕ್ಕಮಗಳೂರಿನಲ್ಲಿ 26, ಚಾಮರಾಜನಗರದಲ್ಲಿ 16, ಕೊಡಗಿನಲ್ಲಿ 10 ಪ್ರಕರಣಗಳು ವರದಿಯಾಗಿವೆ.

ಸೋಮವಾರ ರಾಜ್ಯದಲ್ಲಿ 9708 ಮಂದಿಗೆ ಕ್ಷಿಪ್ರ ಆಂಟಿಜೆನ್‌ ಪರೀಕ್ಷೆ ನಡೆಸಲಾಗಿದೆ. ಇದೂ ಸೇರಿದಂತೆ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 12.05 ಲಕ್ಷ ಮಾದರಿಗಳ ತಪಾಸಣೆ ನಡೆಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com