ಐಜಿಪಿ ರೂಪಾ ಖಡಕ್ ಎಚ್ಚರಿಕೆಗೆ ಬೆಚ್ಚಿದ ಖಾಸಗಿ ಆಸ್ಪತ್ರೆ: ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ವಾಪಸ್!

ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಹಿಂತಿರುಗಿಸಿದೆ. 
ಐಜಿಪಿ ರೂಪಾ
ಐಜಿಪಿ ರೂಪಾ

ಬೆಂಗಳೂರು: ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ.24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಹಿಂತಿರುಗಿಸಿದೆ. 

ಸರ್ಕಾರದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರೂಪಾ ಎಚ್ಚರಿಗೆ ನೀಡಿದ್ದಾರೆ. ನಮ್ಮ ತಂಡಕ್ಕೆ 3 ಖಾಸಗಿ ಆಸ್ಪತ್ರೆಗಳ ಹೊಣೆಗಾರಿಕೆವಹಿಸಿದ್ದಾರೆ. ಸೋಂಕಿತರ ಚಿಕಿತ್ಸೆ ಸಲುವಾಗಿ ಸರ್ಕಾರ ಸೂಚನೆಗಳನ್ನು ಆಸ್ಪತ್ರೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪ್ರತಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲಾಗಿದೆ. ಆ ಪೈಕಿ ಒಂದು ಆಸ್ಪತ್ರೆಯಲ್ಲಿ ಸೋಂಕಿತರಿಗೆ ಹಣ ವಸೂಲಿ ಪ್ರಕರಣವು ದಾಖಲೆ ಸಮೇತ ಪತ್ತೆಯಾಗಿದೆ ಎಂದೂ ರೂಪಾ ಅವರು ತಿಳಿಸಿದ್ದಾರೆ. 

ಹಣ ವಸೂಲಿ ಬಗ್ಗೆ ಆಸ್ಪತ್ರೆ ವಿರುದ್ಧ ಹಲವು ದೂರುಗಳು ಬಂದಿದ್ದವು. ಕೊರೋನಾ ಚಿಕಿತ್ಸೆಗೆ ದಾಖಲಿಸಿಕೊಳ್ಳುವ ಮುನ್ನವೇ ರೂ.1ಲಕ್ಷದಿಂದ ರೂ.2 ಕ್ಷದವರೆಗೂ ಹಣವನ್ನು ಮುಂಗಡವಾಗಿ ಪಡೆಯುತ್ತಿದ್ದರು. ಸಂಪೂರ್ಣ ಚಿಕಿತ್ಸೆಗೆ ರೂ.4-5 ಲಕ್ಷ ವೆಚ್ಚವಾಗರಿದೆ ಎಂದು ರೋಗಿಗಳಿಗೆ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಇದರಿಂದ ಸೋಂಕಿತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ದುಬಾರಿ ಹಣ ವಸೂಲಿ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆಸ್ಪತ್ರೆಗೆ ನಮ್ಮ ತಂಡ ತೆರಳಿ ಪರಿಶೀಲಿಸಿದಾಗ ಹಣ ವಸೂಲಿ ಸಂಬಂಧ ದಾಖಲೆಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ. 

ಕೂಡಲೇ ಆಸ್ಪತ್ರೆ ಸಿಬ್ಬಂದಿಗೆ ಹೆಚ್ಚುವರಿ ಹಣವನ್ನು ರೋಗಿಗಳಿಗೆ ಮರಳಿಸಬೇಕು. ಅಲ್ಲದೆ ಸೋಂಕಿತರಿಗೆ ಸರ್ಕಾರದ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಬೇಕು. ಇಲ್ಲದೆ ಹೋದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಗೆ ನೀಡಲಾಯಿತು ಈಗ ಆಸ್ಪತ್ರೆ ತಾನು ಪಡೆದಿದ್ದ ಹೆಚ್ಚುವರಿ ಹಣವನ್ನು 22 ಸೋಂಕಿತರಿಗೆ ಮರಳಿಸಿದೆ. ಇನ್ನುಳಿದ 4-5 ಮಂದಿ ಬ್ಯಾಂಕ್ ದಾಖಲೆಗಳಲ್ಲಿ ವ್ಯತ್ಯಾಸವಾಗಿದೆ. ಆದಷ್ಟು ಶೀಘ್ರವೇ ಅವರಿಗೆ ಕೂಡ ಹಣ ಜಮೆ ಮಾಡಲಾಗುತ್ತದೆ ಎಂದು ವಿವರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com