ಬೆಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.
ಕೆಎಎಸ್ ಅಧಿಕಾರಿ ಡಾ.ಕೆ.ಎನ್.ಅನುರಾಧ ವಿರುದ್ಧ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೆಐಎಡಿಬಿ ಎಡಿಸಿ ಆಗಿರುವ ಅನುರಾಧ ಅವರು ಜು. 26ರ ರವಿವಾರ ಲಾಕ್ಡೌನ್ ನಡುವೆಯೂ ಬೆಂಗಳೂರಿನಿಂದ ಕೆ.ಆರ್ ಪುರಂ ಮಾರ್ಗವಾಗಿ ಖಾಸಗಿ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅಜಾಗರೂಕತೆ ಚಾಲನೆಯಿಂದ ಕಾರು ಮೆಟ್ರೋ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಜಖಂಗೊಂಡಿತ್ತು.
ಘಟನೆಯಲ್ಲಿ ಅನುರಾಧ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದರು.
ಸದ್ಯ ಕೆ ಆರ್ ಪುರಂ ಪೊಲೀಸರು ಖಾಸಗಿ ಕಾರನ್ನು ವಶಕ್ಕೆ ಪಡೆದಿದ್ದಾರೆ.
Advertisement