ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲು

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.

ಕೆಎಎಸ್​ ಅಧಿಕಾರಿ ಡಾ.ಕೆ.ಎನ್.ಅನುರಾಧ ವಿರುದ್ಧ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಐಎಡಿಬಿ ಎಡಿಸಿ ಆಗಿರುವ ಅನುರಾಧ ಅವರು ಜು. 26ರ ರವಿವಾರ ಲಾಕ್​​​​ಡೌನ್ ನಡುವೆಯೂ ಬೆಂಗಳೂರಿನಿಂದ ಕೆ.ಆರ್ ಪುರಂ ಮಾರ್ಗವಾಗಿ ಖಾಸಗಿ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅಜಾಗರೂಕತೆ ಚಾಲನೆಯಿಂದ ಕಾರು ಮೆಟ್ರೋ ಬ್ಯಾರಿಕೇಡ್​​ಗೆ ಡಿಕ್ಕಿ ಹೊಡೆದು ಜಖಂಗೊಂಡಿತ್ತು.

ಘಟನೆಯಲ್ಲಿ ಅನುರಾಧ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದರು. 

ಸದ್ಯ ಕೆ ಆರ್ ಪುರಂ ಪೊಲೀಸರು ಖಾಸಗಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com