ಕೊರೋನಾ ಭೀತಿ: ಇ-ಆಫೀಸ್ ಮೂಲಕ ಮಾತ್ರ ಕಡತ ಸಲ್ಲಿಸಲು ಸಿಎಂ ಯಡಿಯೂರಪ್ಪ ಸೂಚನೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನುಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ " ಇ - ಆಫೀಸ್ " ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನುಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ " ಇ - ಆಫೀಸ್ " ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಈಗಾಗಲೇ ಜೂನ್ 1ರಿಂದ ಎಲ್ಲಾ ಸಚಿವರ ಕಚೇರಿಗಳಲ್ಲಿ “ಇ - ಆಫೀಸ್ ” ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಎಲ್ಲ ಕಡತ ಹಾಗೂ ಪತ್ರಗಳನ್ನು ಈ ತಂತ್ರಾಂಶದ ಮೂಲಕ ನಿರ್ವಹಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದೆ.

ಅದೇ ರೀತಿ " ಇ - ಆಫೀಸ್ " ತಂತ್ರಾಂಶವನ್ನು ಬಳಸಿ ತಮ್ಮ ಕಚೇರಿಯಿಂದ ಸಚಿವಾಲಯದ ಎಲ್ಲಾ ಇಲಾಖೆಗಳು / ಅಧೀನ ಸಂಸ್ಥೆಗಳಿಗೆ " ಇ - ಆಫೀಸ್ " ಮೂಲಕವೇ ವ್ಯವಹರಿಸಲಾಗುತ್ತಿದೆ. 

ರಾಜ್ಯ ಮಟ್ಟದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಕಚೇರಿ, ಎಲ್ಲಾ ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್, ಪೋಲಿಸ್ ವರಿಷ್ಠಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿ(ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ(ಸಾಮಾಜಿಕ)ಗಳ ಕಚೇರಿಗಳಲ್ಲಿಯೂ " ಇ - ಆಫೀಸ್ " ಅನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com