ಬಿಡಿಎ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿಸಿ ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ. 

ಬೀದರ್ ಜಿಲ್ಲಾಧಿಕಾರಿ ಡಾ. ಎಚ್ ಆರ್ ಮಹಾದೇವ್ ಅವರನ್ನು ಪ್ರಕಾಶ್ ಅವರ ಸ್ಥಾನಕ್ಕೆ ಅಂದರೆ ಬಿಡಿಎ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.  ರಾಷ್ಟ್ರೀಯ ಆರೋಗ್ಯ ಮಿಷನ್ ನ ನಿರ್ದೇಶಕರಾಗಿದ್ದ ರಾಮಚಂದ್ರ ಆರ್ ಅವರನ್ನು ಬೀದರ್ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಭಾರತೀಯ ಆರೋಗ್ಯ ಮಿಷನ್ ನ ನಿರ್ದೇಶಕಿಯಾಗಿ ಅರುಂದತಿ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com