ಚಾಮರಾಜನಗರ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

ಕಮರಹಳ್ಳಿಯ ಮಹೇಶ್ ( 36) ಮೃತ ದುರ್ದೈವಿ. ಕಮರಹಳ್ಳಿಯಿಂದ ಬೇಗೂರಿಗೆ ಬರುತ್ತಿದ್ದ ಬೈಕ್​ಗೆ ಆಸೀಫ್ ಎಂಬಾತ ಕಾರು ಡಿಕ್ಕಿ ಹೊಡೆಸಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. 

ಈತ ಮಡಿಕೇರಿಯಿಂದ ಬಂದು ಕೇರಳ ಗಡಿಯಲ್ಲಿ ಪ್ರಯಾಣಿಕರೊಬ್ಬರನ್ನ ಕರೆತರಲು ಹೋಗುತ್ತಿರಬೇಕಾದರೆ ಈ ಅವಗಡ ಸಂಭವಿಸಿದೆ‌,ಘಟನೆ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಮಹಮ್ಮದ್ ಆಸೀಫ್​​ನನ್ನು​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವರದಿ: ಗುಳಿಪುರ ನಂದೀಶ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com