ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ

ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ದಾಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಜೇನುದಾಳಿಗೊಳಗಾಗಿದ್ದಾರೆ.
ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ
ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ

ಹೊಸಪೇಟೆ: ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ದಾಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಜೇನುದಾಳಿಗೊಳಗಾಗಿದ್ದಾರೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ತಹಸಿಲ್ದಾರ್ ಕಛೇರಿ ಆವರಣದಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ದಾಳಿಯಲ್ಲಿ ಐದು ಜನ ಗಂಭೀರವಾಗಿ ಗಾಯಗೊಂಡಿದ್ದು, ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ತಹಸಿಲ್ದಾರ್ ಕಚೇರಿಯ ಕೆಲಸಕ್ಕೆ ಬಂದಿದ್ದ ಜನ ಸಾಮಾನ್ಯರು ಹೆಜ್ಜೇನು ದಾಳಿ ಬಳಿಕ ಕಚೇರಿಯಿಂದ ಪರಾರಿಯಾಗಿದ್ದಾರೆ. ದಾಳಿ ಬಳಿಕ ಕಛೇರಿ ಆವರಣ ಸಂಪೂರ್ಣ ಖಾಲಿಖಾಲಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com