ಹೊಸಪೇಟೆ: ಮದುವೆಗೆ ಆಮಂತ್ರಣ ನೀಡಲು ತೆರಳುತ್ತಿದ್ದ ತೆಪ್ಪ ಮುಳುಗಿ ಇಬ್ಬರು ಜಲಸಮಾಧಿ!

ಹಗರಿಬೊಮ್ಮನಹಳ್ಳಿ ತಾಲೂಕು ಸೀಗನಹಳ್ಳಿ ಗ್ರಾಮದ ಬಳಿಯ ತುಂಗಭದ್ರ ನದಿಯಲ್ಲಿ ತೆಪ್ಪ ಮುಗುಚಿ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಪೇಟೆ: ಹಗರಿಬೊಮ್ಮನಹಳ್ಳಿ ತಾಲೂಕು ಸೀಗನಹಳ್ಳಿ ಗ್ರಾಮದ ಬಳಿಯ ತುಂಗಭದ್ರ ನದಿಯಲ್ಲಿ ತೆಪ್ಪ ಮುಗುಚಿ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ. 

ಮೃತರನ್ನು ಫಕ್ರುದ್ದೀನ್(18) ಮತ್ತು ಯಮುನೂರಪ್ಪ(28) ಮೃತ ದುರ್ದೈವಿಗಳು. ಇವರು ಸೀಗನ ಹಳ್ಳಿಯಿಂದ ಕೊಪ್ಪಳದ ಕಡೆಗೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ. 

ತೆಪ್ಪದಲ್ಲಿ ಬೈಕ್ ಇದ್ದ ಕಾರಣ ಭಾರ ಹೆಚ್ಚಾಗಿ ಗಾಳಿಗೆ ಮೊಗಚಿದೆ ಎನ್ನಲಾಗಿದೆ. ಸಂಬಂಧಿಗಳಿಗೆ ಮದುವೆ ಆಮಂತ್ರಣ ನೀಡಲು ಕೊಪ್ಪಳ ಜಿಲ್ಲೆಯ ಗ್ರಾಮವೊಂದಕ್ಕೆ ತೆರಳುತಿದ್ದ ಮೃತರು.

ಇನ್ನು ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com