ನೇಕಾರ ಸಮ್ಮಾನ್ ಯೋಜನೆ ಜಾರಿ: ನೇಕಾರರಿಂದ ಅರ್ಜಿ ಆಹ್ವಾನ

ಕೋವಿಡ್-19 ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಜಾರಿಗೊಳಿಸಲಾಗಿರುವ ನೇಕಾರ ಸಮ್ಮಾನ್ ಯೋಜನೆ ನೆರವನ್ನು ಪಡೆದುಕೊಳ್ಳಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಕೋವಿಡ್-19 ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಜಾರಿಗೊಳಿಸಲಾಗಿರುವ ನೇಕಾರ ಸಮ್ಮಾನ್ ಯೋಜನೆ ನೆರವನ್ನು ಪಡೆದುಕೊಳ್ಳಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರ 2020-21 ನೇ ಸಾಲಿನಿಂದ ಕೈಮಗ್ಗ ನೇಕಾರಿಕೆ ಹಾಗೂ ಇತರೆ ಕೈಮಗ್ಗ ಚಟುಚಟಿಕೆ ನಡೆಸುವ ನೇಕಾರರಿಗೆ ತಲಾ 2 ಸಾವಿರ ರೂ ನೆರವು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ೨೦೧೭-೧೮ನೇ ಸಾಲಿನಲ್ಲಿ ೪ನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ನೋಂದಾಯಿಸಲಾದ ಕೈಮಗ್ಗ ನೇಕಾರರಿಗೆ ಪೆಹಚಾನ್ ಕಾರ್ಡ್ ನಂಬರ್ ನೀಡಲಾಗಿದ್ದು, ಈ ಕಾರ್ಡ್ ಹೊಂದಿರುವ ಅಥವಾ ಗಣತಿಯ ಪಟ್ಟಿಯಲ್ಲಿ ನೋಂದಾಯಿಸಲಾಗಿರುವ ಕೈಮಗ್ಗ ನೇಕಾರರಿಗೆ ತಲಾ 2 ಸಾವಿರ ರೂ. ನಂತೆ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಕೈಮಗ್ಗ ನೇಯ್ಗೆಯಲ್ಲಿ ತೊಡಗಿರುವ ನೇಕಾರರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು, ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಸರ್ಕಾರಿ ಎಸ್.ಜೆ.ಪಿ.ಪಾಲಿಟೆಕ್ನಿಕ್ ಆವರಣ, ಕೆ.ಆರ್.ಸರ್ಕಲ್, ಬೆಂಗಳೂರು-೫೬೦೦೦೧ ರವರಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜೂನ್ ೧೭ರೊಳಗೆ ಅರ್ಜಿ ಸಲ್ಲಿಸಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com