ವೃದ್ಧ ದಂಪತಿಯ ಹತ್ಯೆ: ಪುತ್ರನೇ ಕೊಲೆ ಮಾಡಿರುವ ಶಂಕೆ!

ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. 

ನರಸಿಂಹ ರಾಜು (70), ಸರಸ್ವತಿ (60) ಹತ್ಯೆಯಾದ ವೃದ್ಧ ದಂಪತಿ. ಮೂಲತಃ ಮೈಸೂರಿನವರಾದ ದಂಪತಿ, ಕಳೆದ ಒಂದು ವರ್ಷದಿಂದ ಕಾವೇರಿಪುರದ ನಿವಾಸದಲ್ಲಿ ವಾಸವಾಗಿದ್ದರು. 

ಹತ್ಯೆಯಾದ ನರಸಿಂಹರಾಜು ಅವರು ಮುಂಚೆ ಮದುವೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಸರಸ್ವತಿ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಆದರೆ, ಕೆಲ ವರ್ಷಗಳಿಂದ ಕೆಲಸ ಬಿಟ್ಟು ಅವರಿಬ್ಬರೂ ಮನೆಯಲ್ಲೇ ಇದ್ದರು ಎನ್ನಲಾಗಿದೆ.

ಘಟನೆ ಬಳಿಕ ನಿನ್ನೆ ರಾತ್ರಿಯಿಂದ ವೃದ್ಧ ದಂಪತಿ ಪುತ್ರ ಸಂತೋಷ್ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆಡಿಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಂತೋಷ್ ಕೂಡ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಾಮಾಕ್ಷಿಪಾಳ್ಯದಲ್ಲೇ ತನ್ನ ಸ್ವಂತ ಕಚೇರಿ ಹೊಂದಿದ್ದ ಎಂದು ತಿಳಿದು ಬಂದಿದೆ.

ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಕೆಲಸದಾಕೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com